‘ಈ ಮೈತ್ರಿ ಲೋಕಸಭಾ ಚುನಾವಣೆಗಷ್ಟೇ ಸೀಮಿತ’ ಎಂದು ಕಾಂಗ್ರೆಸ್ ನಾಯಕರು ಮನವರಿಕೆ ಮಾಡಿಕೊಡಲು ಯತ್ನಿಸಿದ್ದರು. ‘ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಳ್ಳಲಾಗಿದೆ. ಮೈತ್ರಿ ರಾಜ್ಯಕ್ಕಷ್ಟೇ ಸೀಮಿತ. ಸ್ಥಳೀಯ ಮಟ್ಟದಲ್ಲಿ ಮಾಡಿಕೊಂಡರೆ ಪಕ್ಷ ಸಂಘಟನೆಗೆ ಹೊಡೆತ ಬೀಳುತ್ತದೆ. ಹೀಗಾಗಿ, ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇವೆ’ ಎಂದು ಕಾಂಗ್ರೆಸ್ನ ನಾಯಕರೊಬ್ಬರು ಹೇಳಿದರು.