ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಲಾಕ್ಡೌನ್ ಅನ್ನು ಇನ್ನೂ ಹೆಚ್ಚು ಗಂಭೀರವಾಗಿ ತಗೆದುಕೊಂಡರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇಲ್ಲದಿದ್ದರೆ ಕೊರೊನಾ ವೈರಾಣು ಸೋಂಕು ಹರಡುವಿಕೆಯಿಂದ ದೊಡ್ಡಮಟ್ಟದ ಅನಾಹುತವಾಗುವ ಸಂಭವವಿದೆ. ಹೀಗಾಗಿ ಸಾರ್ವಜನಿಕರು ಮನೆಗಳಲ್ಲೆ ಉಳಿಯಬೇಕು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು’ ಎಂದು ಕೋರಿದರು.