ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ ವರದಿ ಫಲಶ್ರುತಿ: ಅರ್ಹರಿಗೆ ನೇರ ಹಾಲು ವಿತರಣೆ

Last Updated 8 ಏಪ್ರಿಲ್ 2020, 10:20 IST
ಅಕ್ಷರ ಗಾತ್ರ

ಹೊಸಪೇಟೆ: ಲಾಕ್‌ಡೌನ್‌ ಅವಧಿ ಕೊನೆಗೊಳ್ಳುವವರೆಗೆ ನಗರದ ಎಲ್ಲಾ ಕೊಳೆಗೇರಿ ನಿವಾಸಿಗಳು, ಬಡ ಕೂಲಿ ಕಾರ್ಮಿಕರಿಗೆ ನಗರಸಭೆ ಸಿಬ್ಬಂದಿ ನೇರವಾಗಿ ಹಾಲು ತಲುಪಿಸುವ ವ್ಯವಸ್ಥೆ ಬುಧವಾರ ಆರಂಭಿಸಿದೆ.

‘ಉಚಿತ ಹಾಲಿನಲ್ಲೂ ರಾಜಕೀಯ ವಾಸನೆ’ ಶೀರ್ಷಿಕೆ ಅಡಿ ಬುಧವಾರ (ಏ.8) ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ವರದಿಗೆ ಎಚ್ಚೆತ್ತುಕೊಂಡಿರುವ ನಗರಸಭೆ ಅರ್ಹರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಂಡಿದೆ.

‘ಕೆಲವರ ಹಸ್ತಕ್ಷೇಪದಿಂದ ಕಡು ಬಡವರಿಗೆ ಹಾಲು ಸಿಗುತ್ತಿರಲಿಲ್ಲ. ವಿವಿಧ ಇಲಾಖೆಗಳ ಸಿಬ್ಬಂದಿಯ ನೆರವಿನೊಂದಿಗೆ ಬುಧವಾರದಿಂದ ನೇರವಾಗಿ ಅರ್ಹರನ್ನು ಗುರುತಿಸಿ ಹಾಲು ವಿತರಿಸಲಾಗುತ್ತಿದೆ. ಲಾಕ್‌ಡೌನ್‌ ಮುಗಿಯುವವರೆಗೆ ನಮ್ಮ ಸಿಬ್ಬಂದಿಯೇ ವಿತರಿಸುವರು’ ಎಂದು ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT