<figcaption>""</figcaption>.<p><strong>ಬೆಂಗಳೂರು: </strong>ಲಾಕ್ಡೌನ್ ಜಾರಿಯಾದ ಬಳಿಕ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಮದ್ಯ ಮಾರಾಟ ಸೋಮವಾರ ಪುನರಾರಂಭವಾಗಿದ್ದು, ಒಂದೇ ದಿನ ಅಂದಾಜು 12 ಲಕ್ಷ ಲೀಟರ್ಗೂ ಹೆಚ್ಚು ಮಾರಾಟವಾಗಿದೆ.</p>.<p>ರಾಜ್ಯದಾದ್ಯಂತ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ಮದ್ಯದಂಗಡಿಗಳು ತೆರೆದಿದ್ದವು. ಅಂದಾಜು 3.9 ಲಕ್ಷ ಲೀಟರ್ ಬಿಯರ್ ಮತ್ತು 8.5 ಲಕ್ಷ ಲೀಟರ್ ಭಾರತೀಯ ತಯಾರಿಕಾ ಮದ್ಯ ಮಾರಾಟವಾಗಿದೆ. ಇಂದು ಮಾರಾಟವಾದ ಮದ್ಯದ ಅಂದಾಜು ಮೌಲ್ಯ ₹ 45 ಕೋಟಿ ಆಗಿದೆ ಎಂದು ಅಬಕಾರಿ ಆಯುಕ್ತರ ಪ್ರಕಟಣೆ ತಿಳಿಸಿದೆ.</p>.<p>ಎಂಆರ್ಪಿ ದರದಲ್ಲೇ ಮದ್ಯ ಮಾರಾಟ ಮಾಡಲಾಗುತ್ತಿದೆ. ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಮದ್ಯದಂಗಡಿಗಳಿಗೂ ಸೂಚಿಸಲಾಗಿದೆ. ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸಲು ಸೂಚಿಸಲಾಗಿದೆ. ಎಂಆರ್ಪಿ ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div style="text-align:center"><figcaption><strong>ಅಬಕಾರಿ ಆಯುಕ್ತರ ಪ್ರಕಟಣೆ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ಲಾಕ್ಡೌನ್ ಜಾರಿಯಾದ ಬಳಿಕ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಮದ್ಯ ಮಾರಾಟ ಸೋಮವಾರ ಪುನರಾರಂಭವಾಗಿದ್ದು, ಒಂದೇ ದಿನ ಅಂದಾಜು 12 ಲಕ್ಷ ಲೀಟರ್ಗೂ ಹೆಚ್ಚು ಮಾರಾಟವಾಗಿದೆ.</p>.<p>ರಾಜ್ಯದಾದ್ಯಂತ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ಮದ್ಯದಂಗಡಿಗಳು ತೆರೆದಿದ್ದವು. ಅಂದಾಜು 3.9 ಲಕ್ಷ ಲೀಟರ್ ಬಿಯರ್ ಮತ್ತು 8.5 ಲಕ್ಷ ಲೀಟರ್ ಭಾರತೀಯ ತಯಾರಿಕಾ ಮದ್ಯ ಮಾರಾಟವಾಗಿದೆ. ಇಂದು ಮಾರಾಟವಾದ ಮದ್ಯದ ಅಂದಾಜು ಮೌಲ್ಯ ₹ 45 ಕೋಟಿ ಆಗಿದೆ ಎಂದು ಅಬಕಾರಿ ಆಯುಕ್ತರ ಪ್ರಕಟಣೆ ತಿಳಿಸಿದೆ.</p>.<p>ಎಂಆರ್ಪಿ ದರದಲ್ಲೇ ಮದ್ಯ ಮಾರಾಟ ಮಾಡಲಾಗುತ್ತಿದೆ. ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಮದ್ಯದಂಗಡಿಗಳಿಗೂ ಸೂಚಿಸಲಾಗಿದೆ. ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸಲು ಸೂಚಿಸಲಾಗಿದೆ. ಎಂಆರ್ಪಿ ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div style="text-align:center"><figcaption><strong>ಅಬಕಾರಿ ಆಯುಕ್ತರ ಪ್ರಕಟಣೆ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>