<p><strong>ಕಲಬುರ್ಗಿ: </strong>ಲಾಕ್ಡೌನ್ ನಿಯಮ ಉಲ್ಲಂಘಿಸಿ ಜಾತ್ರೆ ನಡೆಸಿದ ಆರೋಪದ ಮೇಲೆ ಆಳಂದ ತಾಲ್ಲೂಕು ಭೂಸನೂರು ಗ್ರಾಮದ 13 ಮಂದಿಯನ್ನು ಭಾನುವಾರ ಬಂಧಿಸಲಾಗಿದೆ.</p>.<p>ಭೂಸನೂರು ಗ್ರಾಮದೇವರಾದ ಹನುಮಂತನ ದೇವಸ್ಥಾನದ ಮುಖಂಡರು, ಗ್ರಾಮದ ಹಿರಿಯರ ನೇತೃತ್ವದಲ್ಲಿಏ. 16ರಂದು ನಸುಕಿನ 3ಕ್ಕೆ ರಥೋತ್ಸವ ನಡೆಸಲಾಗಿತ್ತು. ಜಾತ್ರೆಯ ವಿಡಿಯೊ ತುಣುಕುಗಳು ಏ. 18ರಂದು ವೈರಲ್ ಆಗಿದ್ದವು. ಅದನ್ನು ಅನುಸರಿಸಿ, ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಗಳಲ್ಲಿ ಕೆಲವರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.</p>.<p>ಲಾಕ್ಡೌನ್ ಮುಗಿಯುವವರೆಗೆ ಹಾಗೂ ಜಿಲ್ಲೆಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಜಾತ್ರೆ ನಡೆಸದಂತೆ ತಾಲ್ಲೂಕು ಆಡಳಿತ ಸೂಚನೆ ನೀಡಿತ್ತು. ದೇವಸ್ಥಾನದವರು ಇದಕ್ಕೆ ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೂ ಪೊಲೀಸರ ಕಣ್ಣು ತಪ್ಪಿಸಿ, ನಸುಕಿನಲ್ಲಿ ಜಾತ್ರೆ ನಡೆಸಲಾಗಿದೆ. ಇದರಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.</p>.<p>ಏ. 17ರಂದು ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ರಥೋತ್ಸವ ನಡೆಸಿದ ಪ್ರಕರಣ ಹೊರಬಿದ್ದ ನಂತರವೇ ಭೂಸನೂರು ಪ್ರಕರಣ ಕೂಡ ಆಚೆಗೆ ಬಂದಿತು. ರಾವೂರು ಜಾತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 20 ಮಂದಿಯನ್ನು ಬಂದಿಸಿದ್ದು, 200ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.</p>.<p>ಈ ಎರಡೂ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರಿನಾ ಭೀತಿ ಮತ್ತಷ್ಟು ಹೆಚ್ಚಾಗಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ರಾವೂರು ಹಾಗೂ ಭೂಸನೂರು ಗ್ರಾಮಗಳಲ್ಲಿ ಈಗಾಗಲೇ ಸೀಲ್ಡೌನ್ ಮಾಡಿದ್ದು, ಗ್ರಾಮಕ್ಕೆ ಯಾರೂ ಬರದಂತೆ ಹಾಗೂ ಹೊರಕ್ಕೆ ಯಾರೂ ಹೋಗದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಲಾಕ್ಡೌನ್ ನಿಯಮ ಉಲ್ಲಂಘಿಸಿ ಜಾತ್ರೆ ನಡೆಸಿದ ಆರೋಪದ ಮೇಲೆ ಆಳಂದ ತಾಲ್ಲೂಕು ಭೂಸನೂರು ಗ್ರಾಮದ 13 ಮಂದಿಯನ್ನು ಭಾನುವಾರ ಬಂಧಿಸಲಾಗಿದೆ.</p>.<p>ಭೂಸನೂರು ಗ್ರಾಮದೇವರಾದ ಹನುಮಂತನ ದೇವಸ್ಥಾನದ ಮುಖಂಡರು, ಗ್ರಾಮದ ಹಿರಿಯರ ನೇತೃತ್ವದಲ್ಲಿಏ. 16ರಂದು ನಸುಕಿನ 3ಕ್ಕೆ ರಥೋತ್ಸವ ನಡೆಸಲಾಗಿತ್ತು. ಜಾತ್ರೆಯ ವಿಡಿಯೊ ತುಣುಕುಗಳು ಏ. 18ರಂದು ವೈರಲ್ ಆಗಿದ್ದವು. ಅದನ್ನು ಅನುಸರಿಸಿ, ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಗಳಲ್ಲಿ ಕೆಲವರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.</p>.<p>ಲಾಕ್ಡೌನ್ ಮುಗಿಯುವವರೆಗೆ ಹಾಗೂ ಜಿಲ್ಲೆಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಜಾತ್ರೆ ನಡೆಸದಂತೆ ತಾಲ್ಲೂಕು ಆಡಳಿತ ಸೂಚನೆ ನೀಡಿತ್ತು. ದೇವಸ್ಥಾನದವರು ಇದಕ್ಕೆ ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೂ ಪೊಲೀಸರ ಕಣ್ಣು ತಪ್ಪಿಸಿ, ನಸುಕಿನಲ್ಲಿ ಜಾತ್ರೆ ನಡೆಸಲಾಗಿದೆ. ಇದರಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.</p>.<p>ಏ. 17ರಂದು ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ರಥೋತ್ಸವ ನಡೆಸಿದ ಪ್ರಕರಣ ಹೊರಬಿದ್ದ ನಂತರವೇ ಭೂಸನೂರು ಪ್ರಕರಣ ಕೂಡ ಆಚೆಗೆ ಬಂದಿತು. ರಾವೂರು ಜಾತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 20 ಮಂದಿಯನ್ನು ಬಂದಿಸಿದ್ದು, 200ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.</p>.<p>ಈ ಎರಡೂ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರಿನಾ ಭೀತಿ ಮತ್ತಷ್ಟು ಹೆಚ್ಚಾಗಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ರಾವೂರು ಹಾಗೂ ಭೂಸನೂರು ಗ್ರಾಮಗಳಲ್ಲಿ ಈಗಾಗಲೇ ಸೀಲ್ಡೌನ್ ಮಾಡಿದ್ದು, ಗ್ರಾಮಕ್ಕೆ ಯಾರೂ ಬರದಂತೆ ಹಾಗೂ ಹೊರಕ್ಕೆ ಯಾರೂ ಹೋಗದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>