ಈ ಕುರಿತು ‘ಪ್ರಜಾವಾಣಿ’ಗೆ ಸೋಮವಾರ ಮಾಹಿತಿ ನೀಡಿದ ಸಂಘಟನೆಯ ಜಿಲ್ಲಾ ಪ್ರಚಾರ ಸಂಚಾಲಕ ನಾಗರಾಜ್, ‘ಮಾರ್ಚ್ 12ರಿಂದ ಆರಂಭವಾದ ಅಭಿಯಾನ 24ರವರೆಗೆ ರಾಜ್ಯದೆಲ್ಲೆಡೆ ನಡೆಯಲಿದೆ. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ತಂಡಗಳನ್ನು ರಚಿಸಿದ್ದು, ಪಕ್ಷಾತೀತವಾಗಿ ಎಲ್ಲರಿಗೂ ಕರಪತ್ರ ಹಂಚಲಾಗುತ್ತಿದೆ. ಮೋದಿ ಮತ್ತೆ ಪ್ರಧಾನಿಯಾಗಲು ಸಹಕರಿಸಿ ಎಂಬ ಮನವಿಯನ್ನೂ ಮಾಡುತ್ತಿದ್ದೇವೆ’ ಎಂದರು.