ಆಗ ರಾಜಣ್ಣ, ‘ನಾನು ಹೇಳಿದ್ದನ್ನೇ ಮಾಡಿ ಎನ್ನುತ್ತಿಲ್ಲ. ನಿರ್ಧಾರ ನಿಮಗೆ ಬಿಟ್ಟದ್ದು. ಪಕ್ಷದ ವರಿಷ್ಠರ ಸೂಚನೆಯನ್ನು ನಿಮ್ಮ ಗಮನಕ್ಕೆ ತಂದಿದ್ದೇನೆ ಅಷ್ಟೇ’ ಎಂದರು. ಇತ್ತೀಚೆಗೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದ ಜಿ.ಪರಮೇಶ್ವರ, ‘ಮೈತ್ರಿ ಅಭ್ಯರ್ಥಿ ಬೆಂಬಲಿಸಿ. ನನ್ನ ಮರ್ಯಾದೆ ಉಳಿಸಿ’ ಎಂದು ಕಾರ್ಯಕರ್ತರನ್ನು ಗೋಗರೆದಿದ್ದರು.