‘ಲೋಕಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಪ್ರಚಾರ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಬಗೆದವರ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದೇನೆ. 30 ವರ್ಷಗಳಿಂದ ಹಳೆ ಮೈಸೂರು ಭಾಗದ ಕಾಂಗ್ರೆಸ್ ಬೆಂಬಲಿಗರು ಜನತಾದಳದ ವಿರುದ್ಧ ಕೆಲಸ ಮಾಡಿದ್ದಾರೆ. ಈಗ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಫಲಿತಾಂಶದಲ್ಲಿ ವ್ಯತ್ಯಾಸ ಉಂಟಾಗಲು ಪ್ರಮುಖ ಕಾರಣವಾಯಿತು’ ಎಂದು ಅವರು ವಿಶ್ಲೇಷಿಸಿದರು.