ದುರ್ನಡತೆ ಆರೋಪದ ಮೇಲೆ ಅಮಾನತಾಗಿದ್ದ ಮೂರ್ತಿ, 2005ರ ಡಿಸೆಂಬರ್ 2ರಿಂದ 2012ರ ಜನವರಿ 17ರವರೆಗೆ ‘ಮ್ಯಾಗ್ನಕಾರ್ಟ’ ಎಂಬ ಕಂಪನಿ ಸ್ಥಾಪಿಸಿ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಹಣ್ಣು, ತರಕಾರಿ, ಆಹಾರ ಪದಾರ್ಥ ಮತ್ತು ಬೇಳೆಕಾಳುಗಳನ್ನು ಪೂರೈಸಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಜಯಕುಮಾರ್ ಹಿರೇಮಠ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.