ಬೆಂಗಳೂರು: ಲೋಕಾಯುಕ್ತ ಎನ್ ವೆಂಕಟಾಚಲ ಅವರ ನಿಧನಕ್ಕೆ ರಾಜ್ಯದ ಗಣ್ಯರು, ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಇವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಬುಧವಾರಹೃದಯಾಘಾತದಿಂದ ಕೊನೆಯುಸಿರೆಳೆದರು.
ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ ಗಣ್ಯರು, ಈ ವೇಳೆ ವೆಂಕಟಾಚಲ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಾಗೂ ರಾಜ್ಯದ ಲೋಕಾಯುಕ್ತರಾಗಿ ಭ್ರಷ್ಟರಿಗೆ ಸಿಂಹ ಸ್ವಪ್ನರಾಗಿದ್ದ ಎನ್.ವೆಂಕಟಾಚಲ ಅವರ ಸಾವು ಆಘಾತದ ಸುದ್ದಿ. ಅವರ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟ.
— Karnataka Congress (@INCKarnataka) October 30, 2019
ಎನ್.ವೆಂಕಟಾಚಲ ಅವರ ಸಾಧನೆ ಜೀವನ ಅನುಕರಣೀಯ, ಆದರ್ಶಮಯ.
ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/wHSs5vNGpC
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರುಲೋಕಾಯುಕ್ತದ ಶಕ್ತಿಯನ್ನು ದಕ್ಷತೆಯಿಂದ ಉಪಯೋಗಿಸಿ ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ವೆಂಕಟಾಚಲರವರ ಕೊಡುಗೆ ಅಪಾರ ಎಂದು ಟ್ವೀಟ್ ಮಾಡಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಕರ್ನಾಟಕ ಲೋಕಾಯುಕ್ತ ಎನ್. ವೆಂಕಟಾಚಲ ಅವರ ನಿಧನ ತೀವ್ರ ನೋವುಂಟುಮಾಡಿದೆ. ಲೋಕಾಯುಕ್ತದ ಶಕ್ತಿಯನ್ನು ದಕ್ಷತೆಯಿಂದ ಉಪಯೋಗಿಸಿ ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ವೆಂಕಟಾಚಲರವರ ಕೊಡುಗೆ ಅಪಾರ.
— H D Devegowda (@H_D_Devegowda) October 30, 2019
ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ.
ವೆಂಕಟಾಚಲ ಅವರು ಭ್ರಷ್ಟ ರಾಜಕಾರಣಿಗಳು, ಅಧಿಕಾರಿಗಳಲ್ಲಿ ಭಯ ಹುಟ್ಟಿಸಿದವರು. ಜೊತೆಗೆ ಹಲವು ಪ್ರಾಮಾಣಿಕ ಅಧಿಕಾರಿಗಳಿಗೆ ಮಾದರಿಯಾದ ಲೋಕಾಯುಕ್ತ. ಇವರ ಅಗಲಿಕೆ ನೋವು ತಂದಿದೆ ಎಂದು ಶೋಭಾ ಕರಂದ್ಲಾಜೆಟ್ವೀಟ್ ಮಾಡಿದ್ದಾರೆ.
Saddened to learn about the passing away of former judge of SC, former Karnataka Lokayukta Justice N Venakatachala.
— Shobha Karandlaje (@ShobhaBJP) October 30, 2019
As a Lokayukta he had brought fear in the corrupt politicians & bureaucrats, inspired many honest officials.
My thoughts with his family & friends.#OmShanti pic.twitter.com/gGV0xFmvZP
ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಪಣತೊಟ್ಟವರು: ಯಡಿಯೂರಪ್ಪ
ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ. ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಲು ಹಾಗೂ ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಅವರು ಶ್ರಮಿಸಿದರು.
— B.S. Yediyurappa (@BSYBJP) October 30, 2019
ಅವರ ಕುಟುಂಬ ವರ್ಗ ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. pic.twitter.com/xHivkit7Wa
ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದವರು: ಬಿಜೆಪಿ ಕರ್ನಾಟಕ
ರಾಜ್ಯ ಲೋಕಾಯುಕ್ತ ಸಂಸ್ಥೆಗೆ ಜೀವ ತುಂಬಿ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಎನ್. ವೆಂಕಟಾಚಲ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ.
— BJP Karnataka (@BJP4Karnataka) October 30, 2019
ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. pic.twitter.com/HJC2JKnp5u
ಭ್ರಷ್ಟರ ವಿರುದ್ಧ ಸಮರ ಸಾರಿದವರು: ಸಿದ್ದರಾಮಯ್ಯ
ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರ ನಿಧನದ ಸುದ್ದಿಕೇಳಿ ನೋವಾಯಿತು. ನ್ಯಾ.ವೆಂಕಟಾಚಲ ಅವರು ಲೋಕಾಯುಕ್ತರಾಗಿ ಭ್ರಷ್ಟರ ವಿರುದ್ಧ ಸಮರವನ್ನೇ ಸಾರಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರು.
— Siddaramaiah (@siddaramaiah) October 30, 2019
ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/vPgwkcZ3fx
ಲೋಕಾಯುಕ್ತ ಸಂಸ್ಥೆಗೆ ಅವರ ಕೊಡುಗೆ ಅಪಾರ: ರಾಜೀವ್ ಚಂದ್ರಶೇಖರ್
Saddened by news of Sri #NVenatakachala passing away. His contributions to Lokayukta are remarkable. May his soul rest in peace.
— Rajeev Chandrasekhar 🇮🇳 (@rajeev_mp) October 30, 2019
ಶ್ರೀ ಎನ್ ವೆಂಕಟಾಚಲ ಅವರ ನಿಧನ ಸುದ್ಧಿ ದುಖಃ ತಂದಿದೆ. ಲೋಕಾಯುಕ್ತ ಸಂಸ್ಥೆಗೆ ಅವರ ಕೊಡುಗೆ ಅಪಾರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. #OmShanthi pic.twitter.com/364plSpa4S
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.