<p><strong>ಬೆಂಗಳೂರು:</strong> ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಕೆ.ಜಿಗೆ ₹ 200 ತಲುಪಿರುವುದರ ನಡುವೆಯೇ ಸಗಟು ಹಾಗೂ ಸಣ್ಣ ವರ್ತಕರ ಮೇಲೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಪೊಲೀಸರು ದಾಳಿ ಆರಂಭಿಸಿದ್ದಾರೆ. ದಿಢೀರನೆ ನಡೆಯುತ್ತಿರುವ ದಾಳಿಯಿಂದಾಗಿ ವರ್ತಕರು ಆತಂಕಗೊಂಡಿದ್ದಾರೆ.</p>.<p>ಕಳೆದ 10 ದಿನಗಳಿಂದ ದಾಳಿ ಕಾರ್ಯಾಚರಣೆ ನಡೆಸುತ್ತಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಸುಮಾರು 150 ಸಗಟು ಮತ್ತು ಚಿಲ್ಲರೆ ಈರುಳ್ಳಿ ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರು ಕೃಷಿ ಉತ್ಪನ್ನ ಮಾರುಕಟ್ಟೆಯನ್ನುಶುಕ್ರವಾರ ಸಂಪೂರ್ಣವಾಗಿ ಜಾಲಾಡಿದರು.</p>.<p>ದಾಳಿ ಸಮಯದಲ್ಲಿ ಈರುಳ್ಳಿ ಅಕ್ರಮ ದಾಸ್ತಾನು ಪತ್ತೆಯಾಗಿಲ್ಲ. ವ್ಯಾಪಾರಿಗಳು ಈರುಳ್ಳಿಯ ಅಭಾವ ಸೃಷ್ಟಿಸಿ, ಪರಿಸ್ಥಿತಿಯ ಲಾಭ ಪಡೆಯದಂತೆ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಕಳುಹಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p><strong>250 ಮೆಟ್ರಿಕ್ ಟನ್ಗೆ ಮನವಿ</strong></p>.<p>ಕೇಂದ್ರ ಸರ್ಕಾರ ಈಜಿಪ್ಟ್ ಮತ್ತು ಟರ್ಕಿಯಿಂದ ಆಮದು ಮಾಡಿಕೊಳ್ಳುತ್ತಿರುವ 17 ಸಾವಿರ ಮೆಟ್ರಿಕ್ ಟನ್ ಈರುಳ್ಳಿಯಲ್ಲಿ ರಾಜ್ಯಕ್ಕೆ 250 ಮೆಟ್ರಿಕ್ ಟನ್ ಪೂರೈಸುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದೆ.</p>.<p>ವಿದೇಶಿ ಈರುಳ್ಳಿ ಡಿಸೆಂಬರ್ 15ರ ಬಳಿಕ ರಾಜ್ಯಕ್ಕೆ ಬರಬಹುದು. ಇದರಿಂದ ಬೆಲೆ ನಿಯಂತ್ರಣ ಸಾಧ್ಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ಮಂಜುಳಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಈರುಳ್ಳಿ ಮೇಲೂ ಲೋಕಾಯುಕ್ತರ ಕಣ್ಣು!</strong></p>.<p>ಭ್ರಷ್ಟಾಚಾರಿಗಳ ವಿರುದ್ಧ ಚಾಟಿ ಬೀಸುವ ಲೋಕಾಯುಕ್ತದ ಹದ್ದಿನ ಕಣ್ಣು ಈಗ ಈರುಳ್ಳಿ ಕಾಳಸಂತೆಕೋರರ ಮೇಲೂ ಬಿದ್ದಿದೆ.</p>.<p>ತಮ್ಮ ಅಧೀನದಲ್ಲಿ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳ ಜೊತೆ ಲೋಕಾಯುಕ್ತರು ಸಮಾಲೋಚನೆ ನಡೆಸಿದರು.ಸಿಕ್ಕಾಪಟ್ಟೆ ಏರುತ್ತಿರುವ ಈರುಳ್ಳಿ ಬೆಲೆ ಲೋಕಾಯುಕ್ತರನ್ನು ಚಿಂತೆಗೀಡುಮಾಡಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ತ್ಯಾಗರಾಜನ್ ನೇತೃತ್ವದ ತಂಡ ಎಪಿಎಂಸಿ ಮೇಲೆ ಶುಕ್ರವಾರ ದಾಳಿ ಮಾಡಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಕೆ.ಜಿಗೆ ₹ 200 ತಲುಪಿರುವುದರ ನಡುವೆಯೇ ಸಗಟು ಹಾಗೂ ಸಣ್ಣ ವರ್ತಕರ ಮೇಲೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಪೊಲೀಸರು ದಾಳಿ ಆರಂಭಿಸಿದ್ದಾರೆ. ದಿಢೀರನೆ ನಡೆಯುತ್ತಿರುವ ದಾಳಿಯಿಂದಾಗಿ ವರ್ತಕರು ಆತಂಕಗೊಂಡಿದ್ದಾರೆ.</p>.<p>ಕಳೆದ 10 ದಿನಗಳಿಂದ ದಾಳಿ ಕಾರ್ಯಾಚರಣೆ ನಡೆಸುತ್ತಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಸುಮಾರು 150 ಸಗಟು ಮತ್ತು ಚಿಲ್ಲರೆ ಈರುಳ್ಳಿ ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರು ಕೃಷಿ ಉತ್ಪನ್ನ ಮಾರುಕಟ್ಟೆಯನ್ನುಶುಕ್ರವಾರ ಸಂಪೂರ್ಣವಾಗಿ ಜಾಲಾಡಿದರು.</p>.<p>ದಾಳಿ ಸಮಯದಲ್ಲಿ ಈರುಳ್ಳಿ ಅಕ್ರಮ ದಾಸ್ತಾನು ಪತ್ತೆಯಾಗಿಲ್ಲ. ವ್ಯಾಪಾರಿಗಳು ಈರುಳ್ಳಿಯ ಅಭಾವ ಸೃಷ್ಟಿಸಿ, ಪರಿಸ್ಥಿತಿಯ ಲಾಭ ಪಡೆಯದಂತೆ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಕಳುಹಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p><strong>250 ಮೆಟ್ರಿಕ್ ಟನ್ಗೆ ಮನವಿ</strong></p>.<p>ಕೇಂದ್ರ ಸರ್ಕಾರ ಈಜಿಪ್ಟ್ ಮತ್ತು ಟರ್ಕಿಯಿಂದ ಆಮದು ಮಾಡಿಕೊಳ್ಳುತ್ತಿರುವ 17 ಸಾವಿರ ಮೆಟ್ರಿಕ್ ಟನ್ ಈರುಳ್ಳಿಯಲ್ಲಿ ರಾಜ್ಯಕ್ಕೆ 250 ಮೆಟ್ರಿಕ್ ಟನ್ ಪೂರೈಸುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದೆ.</p>.<p>ವಿದೇಶಿ ಈರುಳ್ಳಿ ಡಿಸೆಂಬರ್ 15ರ ಬಳಿಕ ರಾಜ್ಯಕ್ಕೆ ಬರಬಹುದು. ಇದರಿಂದ ಬೆಲೆ ನಿಯಂತ್ರಣ ಸಾಧ್ಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ಮಂಜುಳಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಈರುಳ್ಳಿ ಮೇಲೂ ಲೋಕಾಯುಕ್ತರ ಕಣ್ಣು!</strong></p>.<p>ಭ್ರಷ್ಟಾಚಾರಿಗಳ ವಿರುದ್ಧ ಚಾಟಿ ಬೀಸುವ ಲೋಕಾಯುಕ್ತದ ಹದ್ದಿನ ಕಣ್ಣು ಈಗ ಈರುಳ್ಳಿ ಕಾಳಸಂತೆಕೋರರ ಮೇಲೂ ಬಿದ್ದಿದೆ.</p>.<p>ತಮ್ಮ ಅಧೀನದಲ್ಲಿ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳ ಜೊತೆ ಲೋಕಾಯುಕ್ತರು ಸಮಾಲೋಚನೆ ನಡೆಸಿದರು.ಸಿಕ್ಕಾಪಟ್ಟೆ ಏರುತ್ತಿರುವ ಈರುಳ್ಳಿ ಬೆಲೆ ಲೋಕಾಯುಕ್ತರನ್ನು ಚಿಂತೆಗೀಡುಮಾಡಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ತ್ಯಾಗರಾಜನ್ ನೇತೃತ್ವದ ತಂಡ ಎಪಿಎಂಸಿ ಮೇಲೆ ಶುಕ್ರವಾರ ದಾಳಿ ಮಾಡಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>