ರಾಮನಗರ: ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.