ಕಾಂಗ್ರೆಸ್ನಿಂದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಹಾಗೂ ಚಿಕ್ಕಮಗಳೂರಿನ ಡಾ.ಆರತಿ ಕೃಷ್ಣ, ಡಾ.ವಿಜಯ್ ಕುಮಾರ್ ಟಿಕೆಟ್ ಆಕಾಂಕ್ಷಿತರು. ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್ ಒತ್ತಡ ಹಾಕುತ್ತಿದೆ ಎನ್ನಲಾಗಿದ್ದು, ಕ್ಷೇತ್ರ ಸಿಕ್ಕರೆ ಬೋಜೇಗೌಡ ಹಾಗೂ ಮಾಜಿ ಶಾಸಕ ವೈಎಸ್ವಿ ದತ್ತ ಆಕಾಂಕ್ಷಿಗಳಾಗುವ ಸಾಧ್ಯತೆ ಹೆಚ್ಚಾಗಿದೆ.