ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1977 ರಿಂದ ಈವರೆಗೆ ಒಂದು ಬಾರಿ (1996) ಜೆಡಿಎಸ್ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್ ಪಾರುಪತ್ಯವಿದೆ. ಕಳೆದ ಎರಡು ಚುನಾವಣೆಗಳಲ್ಲಿ ಸತತವಾಗಿ ಗೆದ್ದಿರುವ ಕಾಂಗ್ರೆಸ್ನ ಎಂ.ವೀರಪ್ಪ ಮೊಯಿಲಿ ಈ ಬಾರಿಯೂ ಅದೇ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿದಿದ್ದು, ಸುಪ್ರೀಂಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರನ್ನು ಇಲ್ಲಿಂದ ಕಣಕ್ಕೆ ಇಳಿಸುವ ಲೆಕ್ಕಾಚಾರದಲ್ಲಿದೆ. ಸ್ಥಳೀಯ ಜೆಡಿಎಸ್ ಮುಖಂಡರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ಇಲ್ಲಿ ಸ್ಪರ್ಧಿಸಬೇಕು ಎಂದು ದುಂಬಾಲು ಬಿದ್ದಿದ್ದಾರೆ.
ಆಕಾಂಕ್ಷಿಗಳು ಕಾಂಗ್ರೆಸ್– ಎಂ.ವೀರಪ್ಪ ಮೊಯಿಲಿ ಜೆಡಿಎಸ್– ವಿ. ಗೋಪಾಲಗೌಡ, ಇ.ಕೃಷ್ಣಪ್ಪ ಬಿಜೆಪಿ–ಬಿ.ಎನ್. ಬಚ್ಚೇಗೌಡ