ಆರಂಭದಲ್ಲಿ 12 ಕ್ಷೇತ್ರಗಳಿಗೆ ಬೇಡಿಕೆಇಟ್ಟಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಕೊನೆಗೆ ‘ಮೈತ್ರಿ’ (3:1) ಸೂತ್ರದಂತೆ 10 ಕ್ಷೇತ್ರಗಳನ್ನುಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದ್ದರು ಆದರೆ, ಹಾಲಿ ಪಕ್ಷದ ಸಂಸದರಿರುವ 10 ಕ್ಷೇತ್ರಗಳನ್ನು ಬಿಟ್ಟು ಕೊಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ವಾದಿಸಿದ್ದರು.