ಇತ್ತೀಚೆಗೆ ಶಿರಸಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಅವರು ‘ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಜೆಡಿಎಸ್ ಅಭ್ಯರ್ಥಿಗೆಂದು ನಿರ್ಧಾರವಾಗಿದೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅತ್ತ ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಟಿಕೆಟ್ ತರಲು ಬೆಂಗಳೂರಿಗೆ ಎಡತಾಕುತ್ತಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು, ‘ಕ್ಷೇತ್ರದಲ್ಲಿ ದುರ್ಬಲವಾಗಿರುವ ಜೆಡಿಎಸ್ಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಬುಧವಾರ ಸಭೆ ನಡೆಸಿ, ನಿರ್ಣಯ ಕೈಗೊಂಡಿದ್ದಾರೆ.