ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು, 7 ಜನರಿಗೆ ಗಂಭೀರ ಗಾಯ

Last Updated 11 ಡಿಸೆಂಬರ್ 2019, 3:41 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಮಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಹರಿಯಾಣ ಕಡೆಗೆ ಹಾಗೂ ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಮೂರು ಲಾರಿಗಳ ನಡುವೆ ಬುಧವಾರ ನಸುಕಿನಲ್ಲಿ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಅಸ್ಪತ್ರೆಗೆ ದಾಖಲಿಸಲಾಗಿದೆ. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT