2016ರಲ್ಲಿ ಚಿಕ್ಕಬಳ್ಳಾಪುರ ನಿವಾಸಿ ಪ್ರವೀಣ್ ಎಂಬುವರು ಶಿವರಾಮೇಗೌಡ ಅವರ ಒಡೆತನದ ರಾಯಲ್ ಕಾನ್ಕಾರ್ಡ್ ಏಜುಕೇಷನ್ ಟ್ರಸ್ಟ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವರಾಮೇಗೌಡ ಅವರು ಈವರೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಲಯ ಅವರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿ, ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತ್ತು.