ಬೆಂಗಳೂರು: ‘ನನಗೆ ರಾಜಕೀಯ ಸಾಕಾಗಿ ಹೋಗಿದೆ, ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ’ ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.
ಬುಧವಾರ ವಿಧಾನಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇದೇ ನನ್ನ ಕೊನೆಯ ಚುನಾವಣೆ ಎಂದು ನಾನು ಈ ಮೊದಲೇ ಹೇಳಿದ್ದೆ. ಇಂದು ಪರಿಸ್ಥಿತಿ ಕೆಟ್ಟು ಹೋಗಿದೆ. ನಾನು ಇನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಮನೆಯಲ್ಲೇ ಇರುತ್ತೇನೆ’ ಎಂದರು.