ಸರ್ಕಾರದ ಪರವಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭಾಗವಹಿಸಿ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಪಾರ ಸಂಖ್ಯೆಯ ಭಕ್ತರು ಉರಿ ಬಿಸಿಲು, ಝಳವನ್ನೂ ಲೆಕ್ಕಿಸದೇ ಮಾಣಿಕ್ಯಗಿರಿಯತ್ತ ಬರುತ್ತಲೇ ಇದ್ದುದನ್ನು ಗಮನಿಸಿದ ಆಶ್ರಮದ ಆಡಳಿತ ಮಂಡಳಿಯವರು ಮತ್ತೆ ಒಂದು ಗಂಟೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದರು.