ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ವರ್ಷಗಳ ಅವಧಿ ಇರುವುದರಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಹಾಗೂ ಹಿರಿಯರು– ಕಿರಿಯರನ್ನು ಒಟ್ಟಾಗಿ ಕೊಂಡೊಯ್ಯಬಲ್ಲ ನಾಯಕನಿಗೇ ಕೆಪಿಸಿಸಿಯ ಸಾರಥ್ಯ ನೀಡಿದರೆ ಒಳಿತು. ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸದೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ವರದಿಯಲ್ಲಿ ಒತ್ತಿ ಹೇಳಲಾಗಿದೆ ಎಂದು ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ವಿವರಿಸಿದರು.