ಮಂಗಳವಾರ ದಶಮಂಟಪಗಳು ಪೌರಾಣಿಕ ಕಥೆಯ ರೂಪಕಗಳನ್ನು ಪ್ರಸ್ತುತ ಪಡಿಸಲಿದ್ದು, ಅದಕ್ಕೆ ದೇವಸ್ಥಾನ ಸಮಿತಿಗಳು ಅಂತಿಮ ಹಂತದ ಸಿದ್ಧತೆ ನಡೆಸಿವೆ. ಕೋಟೆ ಗಣಪತಿ ದೇವಸ್ಥಾನ ಸಮಿತಿ, ಚೌಟಿ ಮಾರಿಯಮ್ಮ, ಪೇಟೆ ಶ್ರೀರಾಮ ಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಚೌಡೇಶ್ವರಿ, ಕೋಟೆ ಮಾರಿಯಮ್ಮ, ಕೋದಂಡ ರಾಮಮಂದಿರ, ಕರವಲೆ ಭಗವತಿ, ಕಂಚಿ ಕಾಮಾಕ್ಷಿಯಮ್ಮ ಸಮಿತಿಯ ಮಂಟಪಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು ಪ್ರವಾಸಿಗರೂ ಕಾತರರಾಗಿದ್ದಾರೆ.