ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠಾಧೀಶರಿಂದ ಮಹದಾಯಿ ಸಭೆ: ರಾಜಕೀಯ ಮುಖಂಡರಿಗೆ ಪ್ರವೇಶವಿಲ್ಲ

Last Updated 7 ಜನವರಿ 2020, 16:42 IST
ಅಕ್ಷರ ಗಾತ್ರ

ಬೆಳಗಾವಿ: ಮಹದಾಯಿ ನದಿ ನೀರು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರವನ್ನು ಹಾಗೂ ಗಡಿ ವಿವಾದ ಕೆದಕುತ್ತಿರುವ ಮಹಾರಾಷ್ಟ್ರಕ್ಕೆ ಸಮರ್ಥ ತಿರುಗೇಟು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ರೂಪಿಸಲು ಚರ್ಚಿಸುವುದಕ್ಕಾಗಿ ಜ. 10ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಈ ಭಾಗದ 7 ಜಿಲ್ಲೆಗಳ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಸಭೆ ಆಯೋಜಿಸಲಾಗಿದೆ.

ಕನ್ನಡ ಹಾಗೂ ರೈತ ಪರ ಸಂಘಟನೆಗಳ ಹೋರಾಟಗಾರರು ಹಾಗೂ ಇತರ ಸಾಮಾಜಿಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಬಹುದು. ಯಾವುದೇ ರಾಜಕೀಯ ಪಕ್ಷದ ನೇತಾರರು ಮತ್ತು ಪಕ್ಷಗಳೊಂದಿಗೆ ಗುರುತಿಸಿಕೊಂಡಿರುವ ಕಾರ್ಯಕರ್ತರನ್ನು ಈ ಸಭೆಗೆ ಆಹ್ವಾನಿಸಿಲ್ಲ ಎಂದು ನಾಗನೂರು ರುದ್ರಾಕ್ಷಿಮಠದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT