ಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಮಠ ನಿರ್ಮಿಸಿರುವ ಅತಿಥಿಗೃಹ ಉದ್ಘಾಟಿಸಿ ಮಾತನಾಡಿ, ‘ಭಕ್ತರು ಮಹದೇಶ್ವರ ಸ್ವಾಮಿಯ ದರ್ಶನಕ್ಕೆ 16 ಕಿ.ಮೀ. ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಾರೆ. ಆದರೆ, ಮೆಟ್ಟಿಲುಗಳು ಸರಿ ಇಲ್ಲದೆ ತೊಂದರೆ ಆಗುತ್ತಿದೆ. ತಿರುಪತಿಯಲ್ಲಿ ಇರುವ ಮಾದರಿಯಲ್ಲಿ ಇಲ್ಲೂ ಮೆಟ್ಟಿಲು ನಿರ್ಮಿಸಲಾಗುವುದು. ಜೊತೆಗೆ ಶೌಚಾಲಯ, ತಂಗುದಾಣಗಳ ಸೌಲಭ್ಯ ಕಲ್ಪಿಸಲಾಗುವುದು. ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದು ತಿಳಿಸಿದರು.