ಜಲಾಭಿಷೇಕದ ಬಳಿಕ ಬೆಳ್ತಂಗಡಿಯ ಶ್ರೀನಿವಾಸ ಶೆಟ್ಟಿ ಮತ್ತು ಕುಟುಂಬಸ್ಥರು ಇಕ್ಷುರಸದ ಅಭಿಷೇಕ ನಡೆಸಿ ಪುಣ್ಯಭಾಗಿಗಳಾದರು. ವೇಣೂರಿನ ಸುನಂದಾದೇವಿ ಇಂದ್ರ ಕ್ಷೀರಾಭಿಷೇಕ ನಡೆಸಿದರು. ಕಳಸದ ಧರಣೇಂದ್ರಯ್ಯ ಕಲ್ಕೋಡು ಕಲ್ಕಚೂರ್ಣ ಅಭಿಷೇಕ ನೆರವೇರಿಸಿದರು. ಬೆಂಗಳೂರಿನ ಶ್ರೇಷ್ಠ ಜೈನ್ ಕಷಾಯ ಅಭಿಷೇಕ ಮಾಡಿದರೆ, ಬೆಂಗಳೂರಿನ ಎಂ.ಎಸ್. ಮೃತ್ಯುಂಜಯ ಕೇಸರಿ ಅಭಿಷೇಕ ನೆರವೇರಿಸಿದರು. ಮೂಡುಬಿದಿರೆಯ ರೋಹಿಣಿ ಆದಿರಾಜ್ ಕಷಾಯ ಅಭಿಷೇಕ ಮಾಡಿದರು. ಮಂಗಳೂರಿನ ರತ್ನಾಕರ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಬೆಂಗಳೂರಿನ ಸೋಹನ್ ಲಾಲ್ ಜೈನ್ ಮತ್ತು ಹುಬ್ಬಳ್ಳಿಯ ಪಂಕಜ ಜೈನ್ ಚತುಷ್ಕೋನ ಅಭಿಷೇಕ ಮಾಡಿ ಪುಣ್ಯಭಾಗಿಗಳಾದರು. ಬೆಳ್ತಂಗಡಿಯ ಶಶಿಕಿರಣ ಜೈನ್ ಶ್ರೀಗಂಧದ ಅಭಿಷೇಕ ಮಾಡಿದರೆ, ಮೂಡುಬಿದಿರೆಯ ಸರೋಜ ಗುಣಪಾಲ ಜೈನ್ ಚಂದನದ ಅಭಿಷೇಕ ನೆರವೇರಿಸಿದರು.