ಬೆಳಿಗ್ಗೆ ಗಂಟೆ 6.30ಕ್ಕೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯಿಂದ ಭವ್ಯ ಅಗ್ರೋದಕ ಮೆರವಣಿಗೆ ರತ್ನಗಿರಿಗೆ ಹೋಗಿ, ಬಳಿಕ ಬೆಳಿಗ್ಗೆ 8.45 ರ ಮೀನ ಲಗ್ನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪ್ರತಿಷ್ಠಾಪಕರಾದ ಡಿ. ವೀರೇಂದ್ರ ಹೆಗ್ಗಡೆ ಅವರು ಮತ್ತು ಕುಟುಂಬಸ್ಥರಿಂದ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ.