ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕರ್ನಾಟಕದ 13 ಮಂದಿ ಶಾಸಕರು ಶನಿವಾರ ಮುಂಬೈಗೆ ತೆರಳಿ ಅಲ್ಲಿನ ಸೋಫಿಟೆಲ್ ಹೋಟೆಲ್ನಲ್ಲಿ ಆಶ್ರಯ ಪಡೆದರು. ಈ ಸಂಗತಿ ದೇಶಾದ್ಯಂತ ಸುದ್ದಿಯಾಗುತ್ತಲೇ ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ ಯುವ ಕಾಂಗ್ರೆಸ್ನ ಉಪಾಧ್ಯಕ್ಷಸುರಾಜ್ ಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಹೊಟೇಲ್ ಬಳಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.