ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಷ್ಟು ವರ್ಷಗಳ ಕಾಲ ಕೋಯ್ನಾ ಜಲಾಶಯದಿಂದ ನೀರು ಪಡೆಯಲು ಹಣ ನೀಡುತ್ತಿದ್ದೇವು. ಆದರೆ, ಈ ಸಲ ಮಹಾರಾಷ್ಟ್ರ ಸರ್ಕಾರವು ತನಗೆ ಹಣ ಬೇಡ. ಸಾಂಗ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ನೀರು ನೀಡಬೇಕೆಂದು ಕೇಳಿಕೊಂಡಿತ್ತು. ಅದರ ಬಗ್ಗೆ ಜಲಸಂಪನ್ಮೂಲ ಅಧಿಕಾರಿಗಳ ಜೊತೆ ಚರ್ಚಿಸಿ, ರಾಜ್ಯದ ಹಿತದೃಷ್ಟಿಯಿಂದ ಒಂದಿಷ್ಟು ಬದಲಾವಣೆ ಸೂಚಿಸಿ, ಎಂಒಯು ವಾಪಸ್ ಕಳುಹಿಸಿದ್ದೇವೆ’ ಎಂದರು.