ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಬೆಂಗಳೂರಿನಲ್ಲಿ ಬುಧವಾರ ಮನವಿ ಸಲ್ಲಿಸಿದರು.
ಈ ಘಟನೆಯಿಂದಾಗಿಹಿಂದುಳಿದ ವರ್ಗದ ವಿಶ್ವಕರ್ಮ ಸಮುದಾಯವು ತಲ್ಲಣ ಅನುಭವಿಸುತ್ತಿದೆ. ಮೃತ ವಿದ್ಯಾರ್ಥಿನಿ ತಂದೆ–ತಾಯಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಕೇಳಿಕೊಳ್ಳಲಾಗಿದೆ.
ಸಿಐಡಿ ತನಿಖೆಯನ್ನು ಶೀಘ್ರ ಮತ್ತು ನಿಷ್ಪಕ್ಷಪಾತವಾಗಿ ನಡೆಸಬೇಕು. ಇಂತಹ ಪೈಶಾಚಿಕ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಂಡು ಸಮಾಜಕ್ಕೆ ಸಮಸಂಜಸ ಸಂದೇಶ ರವಾನಿಸುವ ಕೆಲಸ ಮಾಡಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ.
ಸಂಘದ ಕಾರ್ಯಾಧ್ಯಕ್ಷ ಬಾಲು ಪತ್ತಾರ್, ಕಾರ್ಯದರ್ಶಿ ಸತ್ಯವತಿ ಹಾಗೂ ಸಮಾಜದ ಮುಖಂಡರು ಇದ್ದರು.