‘ಒಡನಾಡಿ ಹೋರಾಟದ ಫಲವಾಗಿ, ಮಾನವ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ 6 ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಅದನ್ನು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ವಿಸ್ತರಿಸಬೇಕು. ಹಾಗೆ ಮಾಡಿದರೆ, ವಿಶ್ವದಲ್ಲೇ ಮಾದರಿ ಕಾರ್ಯಕ್ರಮ ಆಗಲಿದೆ’ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮನವಿ ಮಾಡಿದರು.