‘ಸಾಂತ್ವನ ಕೇಂದ್ರ ಬಹಳ ಮುಖ್ಯ, ಗ್ರಾಮೀಣ ಭಾಗದ ಅದೆಷ್ಟೋ ಹೆಣ್ಣುಮಕ್ಕಳಿಗೆ ಇದರಿಂದ ಪ್ರಯೋಜನವಾಗಿದೆ. ನಾನು ಶಾಸಕಿಯಾಗುವ ಮೊದಲು ಇಂತಹ ಸಾಂತ್ವನ ಕೇಂದ್ರ ನಡೆಸುತ್ತಿದ್ದೆ. ಇದೆಲ್ಲವನ್ನೂ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿದೆ. ಹೀಗಾಗಿ ಅವರು ಸಾಂತ್ವನ ಕೇಂದ್ರಗಳನ್ನು ಮತ್ತೆ ಆರಂಭಿಸಲು ಒಪ್ಪಿಕೊಂಡಿದ್ದಾರೆ. ಶೀಘ್ರ ಆದೇಶ ಹೊರಬೀಳುವ ನಿರೀಕ್ಷೆ ಇದೆ’ ಎಂದು ಸಚಿವರು ‘ಪ್ರಜಾವಾಣಿ’ಗೆ ತಿಳಿಸಿದರು.