ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿದೆ. ಈಗಾಗಲೇ ವಿವಿಧ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಕೃಷಿ ಭೂಮಿಯನ್ನು ನಾಶ ಮಾಡಲಾಗಿದೆ. ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಲ್ಪಕಾಲದಲ್ಲಿ ಹಣ ಕೈಸೇರಿದರೂ, ಅವರು ಕೃಷಿಯಿಂದ ಶಾಶ್ವತವಾಗಿ ದೂರ ಉಳಿಯಲಿದ್ದಾರೆ. ಕೊನೆಗೆ ರೈತ ಕುಟುಂಬಗಳು ಬೀದಿಗೆ ಬೀಳಲಿವೆ’ ಎಂದು ಕಳವಳ ವ್ಯಕ್ತಪಡಿಸಿದರು.