ರಾಯಚೂರು ತಾಲ್ಲೂಕಿನ ಕಮಲಾಪುರ, ಸಿಂಧನೂರು ತಾಲ್ಲೂಕಿನ ಹೊಸಳ್ಳಿ ಕ್ಯಾಂಪ್, ದೇವದುರ್ಗ ತಾಲ್ಲೂಕಿನ ಚಿಕ್ಕಿ ಬುದೂರು ಹಾಗೂ ಹಟ್ಟಿ ಪಟ್ಟಣದ ಸಂತೆ ಬಜಾರ್ದ ಘಟಕಗಳು ಸೇರಿ ಅಧಿಕೃತವಾಗಿ ಒಟ್ಟು 76 ಶುದ್ಧ ನೀರಿನ ಘಟಕಗಳು ಕಾರ್ಯಸ್ಥಗಿತಗೊಳಿಸಿವೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ತ್ವರಿತವಾಗಿ ದುರಸ್ತಿಗೊಳಿಸುವ ಕಾರ್ಯ ಆಗುತ್ತಿಲ್ಲ.