ಗೋಕಾಕದಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ, ಕಾಂಗ್ರೆಸ್ನಿಂದ ಲಖನ್ ಜಾರಕಿಹೊಳಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಬಂಡಾಯ ಎದ್ದಿರುವ ಬಿಜೆಪಿ ಮುಖಂಡ ಅಶೋಕ ಪೂಜಾರಿ ಪಕ್ಷೇತರರಾಗಿ ಸ್ಪರ್ಧಿಸುವರೋ, ಜೆಡಿಎಸ್ನಿಂದಲೋ ಎನ್ನುವ ಕುತೂಹಲವೂ ಇದೆ. ಸಹೋದರರ ಸವಾಲು ಇಲ್ಲಿನ ವಿಶೇಷವಾಗಿದೆ. ರಮೇಶ ಪರವಾಗಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಲಖನ್ ಪರವಾಗಿ ಶಾಸಕ ಸತೀಶ ಜಾರಕಿಹೊಳಿ ಮೊದಲಾದ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಎರಡೂ ಕಡೆಯವರು ಮೆರವಣಿಗೆ ನಡೆಸುವ ಮೂಲಕ ‘ಶಕ್ತಿ ಪ್ರದರ್ಶನ’ಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.