ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಶಿಂಷಾ, ಮುತ್ತತ್ತಿ, ಸಂಗಮ ಮುಳುಗಡೆ?

Last Updated 7 ಡಿಸೆಂಬರ್ 2018, 20:18 IST
ಅಕ್ಷರ ಗಾತ್ರ

ಮಳವಳ್ಳಿ: ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವುದರಿಂದ ಮೈಸೂರು ಮಹಾರಾಜರ ಕಾಲದಲ್ಲಿ ಸ್ಥಾಪಿಸಿರುವ ಸುಮಾರು 80 ವರ್ಷಗಳಷ್ಟು ಹಳೆಯ ಶಿಂಷಾ ಜಲ ವಿದ್ಯುತ್ ಕೇಂದ್ರದ ಒಂದು ಘಟಕ ಮುಳುಗಡೆಯಾಗುವ ಸಾಧ್ಯತೆ ಇದೆ.

ಅಣೆಕಟ್ಟು ನಿರ್ಮಾಣದಿಂದ ಒಟ್ಟು 4,996 ಹೆಕ್ಟೇರ್‌ ಪ್ರದೇಶ ಮುಳುಗಡೆಯಾಗಲಿದೆ. ಶಿಂಷಾದಲ್ಲಿರುವ ಎರಡು ಜಲವಿದ್ಯುತ್‌ ಉತ್ಪಾದನಾ ಘಟಕಗಳ ಪೈಕಿ ಒಂದು ಮುಳುಗಡೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಶುಕ್ರವಾರ ಶಿಂಷಾ ಜಲವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದರು.

1938 ರಲ್ಲಿ ಮೈಸೂರು ಮಹಾರಾಜರ ಕೃಷ್ಣರಾಜ ಒಡೆಯರ್ ರಾಜ್ಯದ ಎರಡನೇ ಜಲವಿದ್ಯುತ್‌ ಉತ್ಪಾದನಾ ಕೇಂದ್ರವನ್ನು ಶಿಂಷಾದಲ್ಲಿ ಸ್ಥಾಪಿಸಿದ್ದರು. ಎರಡು ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ತಲಾ 8.6 ಮೆಗಾವಾಟ್‌ನಂತೆ ಒಟ್ಟು 17.2 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಮುಳುಗಡೆಯಾಗುವ ಘಟಕ ಉಳಿಸಿಕೊಳ್ಳುವ ಉದ್ದೇಶದಿಂದ ಟರ್ಬೈನ್‌ ಅನ್ನು 15 ರಿಂದ 25 ಅಡಿಗಳಷ್ಟು ಮೇಲಕ್ಕೆತ್ತಿ ಕಾರ್ಯ ನಿರ್ವಹಿಸುವಂತೆ ಮಾಡಲು ಸಾಧ್ಯವಿದೆ. ಹಳೆಯ ಯಂತ್ರವನ್ನು ತೆಗೆದು ಹೊಸ ಯಂತ್ರ ಅಳವಡಿಸುವುದರಿಂದ ವಿದ್ಯುತ್‌ ಉತ್ಪಾದನೆ ಪ್ರಮಾಣವನ್ನೂ ಹೆಚ್ಚಿಸಬಹುದಾಗಿದೆ. ಈ ಕುರಿತು ಪರಿಶೀಲನೆ ನಡೆಸುವಂತೆ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಹೇಳಿದ್ದೇನೆ ಎಂದರು.

ಅಣೆಕಟ್ಟೆ ನಿರ್ಮಾಣದಿಂದ ಹಿನ್ನೀರಿನಲ್ಲಿ ಧಾರ್ಮಿಕ ಪ್ರವಾಸಿ ತಾಣಗಳಾದ ಮುತ್ತತ್ತಿ, ಸಂಗಮ, ಚೋಳರ ಕಾಲದ ದೇವಸ್ಥಾನವೂ ಮುಳುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT