‘ನೀವು ಮಾಧ್ಯಮದವರು ನಮಗೊಂದು ಸಹಾಯ ಮಾಡುವಿರಾ, ಪ್ರವಾಹದಲ್ಲಿ ಸಿಲುಕಿರುವ ನಮ್ಮ ಬಸ್ನಲ್ಲಿ ಲ್ಯಾಪ್ಟಾಪ್, ಕ್ಯಾಮೆರಾ ಸೇರಿದಂತೆ ಬೆಲೆಬಾಳುವ ವಸ್ತುಗಳಿವೆ. ಅವುಗಳನ್ನು ಸುರಕ್ಷಿತವಾಗಿ ನಮಗೆ ತಲುಪಿಸಲು ವ್ಯವಸ್ಥೆ ಮಾಡುತ್ತೀರಾ’ ಎಂದು ಅವಂತಿಕಾ ‘ಪ್ರಜಾವಾಣಿ’ಗೆ ವಿನಂತಿಸಿದರು. ಆದರೆ ಮಲಪ್ರಭೆ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಧ್ಯಾಹ್ನದ ವೇಳೆಗೆ ಬಸ್ ಪ್ರವಾಹದ ನೀರಿನಲ್ಲಿ ಮುಳುಗಿತ್ತು.