‘ಡೀಸೆಲ್ ದರ ಹೆಚ್ಚಳದಿಂದ ಬಸ್, ರೈಲ್ವೆ ಪ್ರಯಾಣ ದರ ಹೆಚ್ಚಳವಾಗಲಿದ್ದು, ಬಡ, ಮಧ್ಯಮ ವರ್ಗಕ್ಕೆ ಹೊರೆಯಾಗಲಿದೆ. ಪೆಟ್ರೋಲ್ ದರ ಹೆಚ್ಚಳ ಸಣ್ಣ ಉದ್ದಿಮೆದಾರರು ಮತ್ತು ನೌಕರರ ಮೇಲೂ ಪರಿಣಾಮ ಬೀರಲಿದೆ. ಲಾಕ್ಡೌನ್ನಿಂದ ಜನರು ಕೆಲಸ, ಆದಾಯವಿಲ್ಲದೆ ಪರದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ತೈಲ ಬೆಲೆಯನ್ನು ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.