<figcaption>""</figcaption>.<p><strong>ಬೆಂಗಳೂರು</strong>: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ನ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾದರು.</p>.<p>ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾದರು. ಪಕ್ಷೇತರರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ಅದು ತಿರಸ್ಕೃತಗೊಂಡಿತು.</p>.<p>‘ನಾಲ್ಕೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ, ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಎಚ್.ಡಿ.ದೇವೇಗೌಡ ಅವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.</p>.<figcaption><em><strong>ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನ ಎಚ್.ಡಿ.ದೇವೇಗೌಡ, ಬಿಜೆಪಿಯ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ</strong></em></figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು</strong>: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ನ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾದರು.</p>.<p>ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾದರು. ಪಕ್ಷೇತರರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ಅದು ತಿರಸ್ಕೃತಗೊಂಡಿತು.</p>.<p>‘ನಾಲ್ಕೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ, ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಎಚ್.ಡಿ.ದೇವೇಗೌಡ ಅವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.</p>.<figcaption><em><strong>ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನ ಎಚ್.ಡಿ.ದೇವೇಗೌಡ, ಬಿಜೆಪಿಯ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ</strong></em></figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>