‘ಡಾ. ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರು ಕಂಡ ಕನಸುಗಳನ್ನು ನನಸು ಮಾಡಬೇಕೇ ಹೊರತು ಅವುಗಳನ್ನು ನುಚ್ಚುನೂರು ಮಾಡುವಂತಹ ಕೃತ್ಯಕ್ಕೆ ಇಳಿಯಬಾರದು. ನಿರಂತರ ಚಳವಳಿ ಮೂಲಕ ಅವರು ದೇಶಕ್ಕೆ ದೊರಕಿಸಿಕೊಟ್ಟ ಸ್ವಾತಂತ್ರ್ಯ ಮತ್ತು ಅನುಷ್ಠಾನಕ್ಕೆ ತಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳದಿದ್ದರೆ, ನಾವು ಉತ್ತಮ ಪ್ರಜೆಗಳೆಂದು ಹೇಳಿಕೊಳ್ಳಲು ಆಗುವುದಿಲ್ಲ’ ಎಂದರು.