ಲಾಕ್ಡೌನ್ ಘೋಷಣೆ ಅಧಿಕಾರ ಇದೆ: ‘ಡಿಕೆಶಿ ಲಾಕ್ಡೌನ್ ಘೋಷಣೆ ಮಾಡಲು ಬರುವುದಿಲ್ಲ’ ಎಂಬ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ಹೇಳಿಕೆ ಪ್ರಸ್ತಾಪಿಸಿದ ಡಿ.ಕೆ.ಶಿವಕುಮಾರ್, ‘ನಾನು ಕನಕಪುರದ ನಾಗರಿಕ, ಜನ ನನಗೆ ಅಧಿಕಾರ ಕೊಟ್ಟಿದ್ದಾರೆ. ಹಾಗಾಗಿ ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಅವರು ಸರ್ಕಾರದ ಭಾಗವಾಗಿದ್ದಾರೆ. ಅವರು ದೊಡ್ಡವರು, ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ಯಾವುದೇ ಎಪಿಸೋಡ್ ಬೇಕಾದರೂ ಬಿಡುಗಡೆ ಮಾಡಲಿ’ ಎಂದರು