<p><strong>ನವದೆಹಲಿ:</strong> ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐಗೆ ಎಂ.ನಾಗೇಶ್ವರ ರಾವ್ ಅವರನ್ನು ಮಧ್ಯಂತರ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದು ಅಕ್ರಮ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p>.<p>ಸಿಬಿಐಗೆ ಹೊಸ ನಿರ್ದೇಶಕರನ್ನು ನೇಮಕ ಮಾಡಲು ತಕ್ಷಣ ಆಯ್ಕೆ ಸಮಿತಿ ಸಭೆ ಕರೆಯುವಂತೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಪ್ರಧಾನಿ ನೇತೃತ್ವದ ಮೂವರು ಸದಸ್ಯರ ಸಮಿತಿಯು ಇತ್ತೀಚೆಗೆ ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ಈ ಸಮಿತಿಯ ಸದಸ್ಯರಾಗಿದ್ದ ಖರ್ಗೆ ಅವರು ಅಲೋಕ್ ವರ್ಮಾ ವರ್ಗಾವಣೆ ಕ್ರಮವನ್ನು ಬಲವಾಗಿ ವಿರೋಧಿಸಿದ್ದರು.</p>.<p>‘ಸಿಬಿಐನಂತಹ ಸ್ವಾಯತ್ತ ಸಂಸ್ಥೆಗೆ ಸ್ವತಂತ್ರ ಮನೋಭಾವದ ನಿರ್ದೇಶಕರು ನೇಮಕವಾಗುವುದು ಸರ್ಕಾರಕ್ಕೆ ಬೇಕಾಗಿಲ್ಲ. ಸ್ವತಂತ್ರ ಮನೋಭಾವದ ಅಧಿಕಾರಿಗಳಿಗೆ ಸರ್ಕಾರ ಹೆದರುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ಸಿಬಿಐ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡು ರೀತಿ ಇದಕ್ಕೆ ಸ್ಪಷ್ಟ ನಿದರ್ಶನ ಎಂದು ಖರ್ಗೆ ಹೇಳಿದ್ದಾರೆ.</p>.<p>ಎಂ.ಎನ್. ನಾಗೇಶ್ವರ ರಾವ್ ಅವರನ್ನು ಸಿಬಿಐ ಮಧ್ಯಂತರ ನಿರ್ದೇಶಕರನ್ನಾಗಿ ನೇಮಕ ಮಾಡುವ ನಿರ್ಧಾರ ಜ.10ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.</p>.<p><strong>ವರದಿ ಬಹಿರಂಗಕ್ಕೆ ಒತ್ತಡ</strong></p>.<p>*ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಸಂಬಂಧಿಸಿದಂತೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಮತ್ತು ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಸಲ್ಲಿಸಿದ ವರದಿಗಳನ್ನು ತಕ್ಷಣ ಬಹಿರಂಗಗೊಳಿಸಬೇಕು</p>.<p>*ಅಲೋಕ್ ವರ್ಮಾ ಭವಿಷ್ಯ ನಿರ್ಧರಿಸಲು ಜ.10ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೂವರು ಸದಸ್ಯರ ಸಮಿತಿ ಸಭೆಯ ನಡಾವಳಿಗಳನ್ನು ಬಹಿರಂಗಪಡಿಸಬೇಕು</p>.<p>*ಅಲೋಕ್ ವರ್ಮಾ ವಿರುದ್ಧ ಭ್ರಷ್ಟಾಚಾರ ಆರೋಪ ನಿರಾಧಾರ ಎಂದು ಕೇಂದ್ರ ಜಾಗೃತ ಆಯೋಗದ ವರದಿ ಹೇಳಿದೆ</p>.<p>*ಸಿಬಿಐ ಅಧಿಕಾರಿಗಳ ಸಂಘರ್ಷಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐಗೆ ಎಂ.ನಾಗೇಶ್ವರ ರಾವ್ ಅವರನ್ನು ಮಧ್ಯಂತರ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದು ಅಕ್ರಮ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p>.<p>ಸಿಬಿಐಗೆ ಹೊಸ ನಿರ್ದೇಶಕರನ್ನು ನೇಮಕ ಮಾಡಲು ತಕ್ಷಣ ಆಯ್ಕೆ ಸಮಿತಿ ಸಭೆ ಕರೆಯುವಂತೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಪ್ರಧಾನಿ ನೇತೃತ್ವದ ಮೂವರು ಸದಸ್ಯರ ಸಮಿತಿಯು ಇತ್ತೀಚೆಗೆ ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ಈ ಸಮಿತಿಯ ಸದಸ್ಯರಾಗಿದ್ದ ಖರ್ಗೆ ಅವರು ಅಲೋಕ್ ವರ್ಮಾ ವರ್ಗಾವಣೆ ಕ್ರಮವನ್ನು ಬಲವಾಗಿ ವಿರೋಧಿಸಿದ್ದರು.</p>.<p>‘ಸಿಬಿಐನಂತಹ ಸ್ವಾಯತ್ತ ಸಂಸ್ಥೆಗೆ ಸ್ವತಂತ್ರ ಮನೋಭಾವದ ನಿರ್ದೇಶಕರು ನೇಮಕವಾಗುವುದು ಸರ್ಕಾರಕ್ಕೆ ಬೇಕಾಗಿಲ್ಲ. ಸ್ವತಂತ್ರ ಮನೋಭಾವದ ಅಧಿಕಾರಿಗಳಿಗೆ ಸರ್ಕಾರ ಹೆದರುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ಸಿಬಿಐ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡು ರೀತಿ ಇದಕ್ಕೆ ಸ್ಪಷ್ಟ ನಿದರ್ಶನ ಎಂದು ಖರ್ಗೆ ಹೇಳಿದ್ದಾರೆ.</p>.<p>ಎಂ.ಎನ್. ನಾಗೇಶ್ವರ ರಾವ್ ಅವರನ್ನು ಸಿಬಿಐ ಮಧ್ಯಂತರ ನಿರ್ದೇಶಕರನ್ನಾಗಿ ನೇಮಕ ಮಾಡುವ ನಿರ್ಧಾರ ಜ.10ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.</p>.<p><strong>ವರದಿ ಬಹಿರಂಗಕ್ಕೆ ಒತ್ತಡ</strong></p>.<p>*ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಸಂಬಂಧಿಸಿದಂತೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಮತ್ತು ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಸಲ್ಲಿಸಿದ ವರದಿಗಳನ್ನು ತಕ್ಷಣ ಬಹಿರಂಗಗೊಳಿಸಬೇಕು</p>.<p>*ಅಲೋಕ್ ವರ್ಮಾ ಭವಿಷ್ಯ ನಿರ್ಧರಿಸಲು ಜ.10ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೂವರು ಸದಸ್ಯರ ಸಮಿತಿ ಸಭೆಯ ನಡಾವಳಿಗಳನ್ನು ಬಹಿರಂಗಪಡಿಸಬೇಕು</p>.<p>*ಅಲೋಕ್ ವರ್ಮಾ ವಿರುದ್ಧ ಭ್ರಷ್ಟಾಚಾರ ಆರೋಪ ನಿರಾಧಾರ ಎಂದು ಕೇಂದ್ರ ಜಾಗೃತ ಆಯೋಗದ ವರದಿ ಹೇಳಿದೆ</p>.<p>*ಸಿಬಿಐ ಅಧಿಕಾರಿಗಳ ಸಂಘರ್ಷಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>