ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹೀಗೆ ಶಾಸಕರನ್ನು ಖರೀದಿ ಮಾಡುವ ಪರಂಪರೆಯೇ ಬಿಜೆಪಿಗೆ ಇದೆ. ಗೋವಾ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶದಲ್ಲಿ ಇದೇ ವಿಧಾನಗಳಿಂದ ಸರ್ಕಾರ ರಚಿಸಿದ್ದಾರೆ. ಕರ್ನಾಟಕದಲ್ಲಿ ಈ ಮೊದಲೂ ಇಂತಹ ಕೆಲಸ ಮಾಡಿದ್ದರು. ಖರೀದಿ ಮಾಡಿ ಸರ್ಕಾರ ರಚಿಸುವ ಕೆಲಸಕ್ಕೆ ಯಡಿಯೂರಪ್ಪ ಕೈ ಹಾಕಿದ್ದರು. ಆದರೆ, ವಿಶ್ವಾಸಮತ ಯಾಚನೆಗೆ ಮುನ್ನವೇ ಸೋಲೊಪ್ಪಿಕೊಂಡು ರಾಜೀನಾಮೆ ನೀಡಿದರು. ಈಗ ಮತ್ತೆ ಅಂತಹುದೇ ಪ್ರಯತ್ನ ನಡೆಸಿದ್ದಾರೆ’ ಎಂದರು.