‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರು ಒಂದು ವರ್ಷ ಮೊದಲಿಂದಲೇ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ತಮ್ಮ
ಕ್ಷೇತ್ರಕ್ಕೆ ನೀಡಿದ ಹಲವಾರು ಕೊಡುಗೆಗಳಿಂದಾಗಿ, ಖರ್ಗೆ ಅವರು ಗೆದ್ದೇ ಗೆಲ್ಲುತ್ತಾರೆ ಎಂಬುದು ಕಾರ್ಯಕರ್ತರ ವಿಶ್ವಾಸವಾಗಿತ್ತು. ಈ ಅತಿಯಾದ ಆತ್ಮವಿಶ್ವಾಸದಿಂದಲೇ ಹಿನ್ನಡೆಯಾಯಿತು’ ಎಂದು ಅವರು ಧ್ರುವನಾರಾಯಣ ತಿಳಿಸಿದ್ದಾರೆ.