<p><strong>ಬೆಂಗಳೂರು</strong>: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು, ಅಬ್ಬರ ತುಸು ಕಡಿಮೆಯಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ 6 ಬ್ಯಾರೇಜ್ಗಳು ಸಂಚಾರಕ್ಕೆ ಮುಕ್ತವಾಗಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನು ವಾರ 8.3 ಮಿ.ಮೀ. ಮಳೆಯಾಗಿದೆ. ಕಡಲ ಅಬ್ಬರವೂ ಹೆಚ್ಚಿದ್ದು, ತಾಲ್ಲೂಕಿನ ಉಳ್ಳಾಲ ಸಮೀಪದ ಉಚ್ಚಿಲದ ವಸಂತ ಮತ್ತು ಸೋಮೇಶ್ವರ ಮೋಹನ್ ಎಂಬುವರ ಮನೆಯಗಳು ಅಪಾಯದಂಚಿನಲ್ಲಿವೆ.</p>.<p>ಉಡುಪಿ ಜಿಲ್ಲೆಯಲ್ಲಿ ಹಲವು ದಿನ ಗಳಿಂದ ಅಬ್ಬರಿಸಿದ್ದ ಮಳೆ ಭಾನುವಾರ ಸ್ವಲ್ಪ ಬಿಡುವು ನೀಡಿತ್ತು. ಆಗಾಗ ಮಳೆ ಸುರಿದರೂ ಬಿರುಸಾಗಿರಲಿಲ್ಲ.</p>.<p>ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿದಿದೆ. ಕೊಪ್ಪ ಸುತ್ತಮುತ್ತ ಹದ ಮಳೆಯಾಗಿದೆ. ಎನ್.ಆರ್.ಪುರ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ್ದು ಸಾಧಾರಣ ಮಳೆಯಾಗಿದೆ.</p>.<p>ಮೈಸೂರಿನಲ್ಲಿ ಸಂಜೆ ಬಿರುಸಾಗಿ ಮಳೆ ಸುರಿಯಿತು. ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಚಿತ್ರದುರ್ಗ ನಗರದಲ್ಲಿ ಉತ್ತಮ ಮಳೆಯಾಗಿದ್ದು, ಹೊಳಲ್ಕೆರೆ ಪಟ್ಟಣ ಹಾಗೂ ಸುತ್ತಮುತ್ತ ಬಿರುಸಿನ ಮಳೆ ಸುರಿಯಿತು.ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಲ್ಲಿ ಎರಡು ಗಂಟೆ ಕಾಲ ಬಿರುಸಾಗಿ ಮಳೆ ಸುರಿಯಿತು.</p>.<p class="Subhead"><strong>6 ಬ್ಯಾರೇಜ್ ಸಂಚಾರಕ್ಕೆ ಮುಕ್ತ</strong></p>.<p class="Subhead">ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕು ಗಳಲ್ಲಿ ಮುಳುಗಡೆಯಾಗಿದ್ದ ಎಲ್ಲ 6 ಬ್ಯಾರೇಜ್ಗಳೂ ಸಂಚಾರಕ್ಕೆ ಮುಕ್ತಗೊಂಡಿವೆ. ಚಿಕ್ಕೋಡಿ ತಾಲ್ಲೂಕಿನಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದ್ದ ನೀರಿನ ಪ್ರಮಾಣ 50ಸಾವಿರ ಕ್ಯುಸೆಕ್ಗೆ ಇಳಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು, ಅಬ್ಬರ ತುಸು ಕಡಿಮೆಯಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ 6 ಬ್ಯಾರೇಜ್ಗಳು ಸಂಚಾರಕ್ಕೆ ಮುಕ್ತವಾಗಿವೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನು ವಾರ 8.3 ಮಿ.ಮೀ. ಮಳೆಯಾಗಿದೆ. ಕಡಲ ಅಬ್ಬರವೂ ಹೆಚ್ಚಿದ್ದು, ತಾಲ್ಲೂಕಿನ ಉಳ್ಳಾಲ ಸಮೀಪದ ಉಚ್ಚಿಲದ ವಸಂತ ಮತ್ತು ಸೋಮೇಶ್ವರ ಮೋಹನ್ ಎಂಬುವರ ಮನೆಯಗಳು ಅಪಾಯದಂಚಿನಲ್ಲಿವೆ.</p>.<p>ಉಡುಪಿ ಜಿಲ್ಲೆಯಲ್ಲಿ ಹಲವು ದಿನ ಗಳಿಂದ ಅಬ್ಬರಿಸಿದ್ದ ಮಳೆ ಭಾನುವಾರ ಸ್ವಲ್ಪ ಬಿಡುವು ನೀಡಿತ್ತು. ಆಗಾಗ ಮಳೆ ಸುರಿದರೂ ಬಿರುಸಾಗಿರಲಿಲ್ಲ.</p>.<p>ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿದಿದೆ. ಕೊಪ್ಪ ಸುತ್ತಮುತ್ತ ಹದ ಮಳೆಯಾಗಿದೆ. ಎನ್.ಆರ್.ಪುರ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ್ದು ಸಾಧಾರಣ ಮಳೆಯಾಗಿದೆ.</p>.<p>ಮೈಸೂರಿನಲ್ಲಿ ಸಂಜೆ ಬಿರುಸಾಗಿ ಮಳೆ ಸುರಿಯಿತು. ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಚಿತ್ರದುರ್ಗ ನಗರದಲ್ಲಿ ಉತ್ತಮ ಮಳೆಯಾಗಿದ್ದು, ಹೊಳಲ್ಕೆರೆ ಪಟ್ಟಣ ಹಾಗೂ ಸುತ್ತಮುತ್ತ ಬಿರುಸಿನ ಮಳೆ ಸುರಿಯಿತು.ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಲ್ಲಿ ಎರಡು ಗಂಟೆ ಕಾಲ ಬಿರುಸಾಗಿ ಮಳೆ ಸುರಿಯಿತು.</p>.<p class="Subhead"><strong>6 ಬ್ಯಾರೇಜ್ ಸಂಚಾರಕ್ಕೆ ಮುಕ್ತ</strong></p>.<p class="Subhead">ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕು ಗಳಲ್ಲಿ ಮುಳುಗಡೆಯಾಗಿದ್ದ ಎಲ್ಲ 6 ಬ್ಯಾರೇಜ್ಗಳೂ ಸಂಚಾರಕ್ಕೆ ಮುಕ್ತಗೊಂಡಿವೆ. ಚಿಕ್ಕೋಡಿ ತಾಲ್ಲೂಕಿನಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದ್ದ ನೀರಿನ ಪ್ರಮಾಣ 50ಸಾವಿರ ಕ್ಯುಸೆಕ್ಗೆ ಇಳಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>