ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾಗೆ ಮುಖಭಂಗ: ಎಸ್‌.ಎಂ. ಕೃಷ್ಣ

Last Updated 5 ಫೆಬ್ರುವರಿ 2019, 18:55 IST
ಅಕ್ಷರ ಗಾತ್ರ

ಬೆಂಗಳೂರು: ಶಾರದಾ ಚಿಟ್‌ ಫಂಡ್‌ ಹಗರಣದ ಕುರಿತು ಕೋಲ್ಕತ್ತದ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ ಸಿಬಿಐ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶದಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಮುಖಭಂಗ ಆಗಿದೆ ಎಂದು ಬಿಜೆಪಿ ನಾಯಕ ಎಸ್‌.ಎಂ. ಕೃಷ್ಣ ಪ್ರತಿಕ್ರಿಯಿಸಿದ್ದಾರೆ.

ಹಗರಣ ಕುರಿತು ತನಿಖೆ ನಡೆಸಲು ಬಂದ ಸಿಬಿಐ ಅಧಿಕಾರಿಗಳನ್ನೇ ಬಂಧಿಸಲು ಮುಖ್ಯಮಂತ್ರಿ ಸೂಚಿಸಿರುವುದು ತಪ್ಪು. ಈ ಮೂಲಕ ಅವರು ಅಧಿಕಾರ ಹಾಗೂ ತಮ್ಮ ಸ್ಥಾನ ದುರುಪಯೋಗಪಡಿಸಿಕೊಂಡಿದ್ದಾರೆ. ಈಗ ಅಧಿಕಾರಿ ಖುದ್ದು ಹಾಜರಾಗಿ ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಈ ಮಧ್ಯೆ ರಾಜಕೀಯ ಮೈಲೇಜ್‌ಗಾಗಿ ಹಲವು ನಾಟಕೀಯ ಸನ್ನಿವೇಶಗಳನ್ನು ಮಮತಾ ಪ್ರದರ್ಶಿಸಿದರು. ಆದರೆ, ಸುಪ್ರೀಂ ಕೋರ್ಟ್‌ ಅವರ ಸ್ಥಾನವನ್ನು ತೋರಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT