ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತರ– ಗ್ರಾಹಕರ ಸಮಸ್ಯೆ ನಿಭಾಯಿಸಿ’: ಸಿದ್ದರಾಮಯ್ಯ ಪತ್ರ

Last Updated 5 ಏಪ್ರಿಲ್ 2020, 21:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಸೋಂಕಿನ ಭೀತಿಯಿಂದ ರೈತರು ಮತ್ತು ಗ್ರಾಹಕರು ತೀವ್ರ ಸಮಸ್ಯೆಯಲ್ಲಿ ಸಿಲುಕಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಕಷ್ಟಪಟ್ಟು ಬೆಳೆದಿರುವ ಬೆಳೆಗಳನ್ನು ರೈತರು ಹೊಲದಲ್ಲೇ ಹೂತು ಹಾಕುತ್ತಿದ್ದಾರೆ. ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಹೋದರೆ ಪೊಲೀಸರುಲಂಚ ಕೊಡದೆ ವಾಹನ ಬಿಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಶೇಷ ಪ್ಯಾಕೇಜ್‌ ಘೋಷಿಸಿ: ‘ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲು ವಿಶೇಷ ಪ್ಯಾಕೇಜ್‌ ನೀಡಬೇಕು’ ಎಂದೂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT