ಬೆಂಗಳೂರಿನ ಕಾಮಾಕ್ಷಿಪಾಳ್ಯದ (ರಂಗನಾಥನಗರ) ಎಂ.ಸಂತೋಷ್ (35) ಎಂಬಾತ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ. ನದಿಯಲ್ಲಿ ಕಡಿಮೆ ನೀರಿದ್ದ ಕಾರಣ ಆತನ ಎಡಗಾಲು ಮುರಿದಿದೆ. ಮಂಡ್ಯದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.