ನಗರದ ಶಿವಭಾಗ್ನಲ್ಲಿ ಭಾನುವಾರ ತಡರಾತ್ರಿ ರಸ್ತೆಯಲ್ಲಿ ನಿಂತು ಆಟೊಗಾಗಿ ದಾರಿ ಕಾಯುತ್ತಿದ್ದ ಮಹಿಳೆಯನ್ನು ಪೊಲೀಸ್ ವಾಹನದಲ್ಲೇ ಮೆಡಿಕಲ್ಗೆ ಕರೆದೊಯ್ದ ಎಎಸ್ಐ, ಔಷಧಿ ಖರೀದಿಸಿದ ಬಳಿಕ ಅದೇ ವಾಹನದಲ್ಲಿ ಅವರನ್ನು ಮನೆಗೆ ತಲುಪಿಸಿದ್ದಾರೆ. ಎಎಸ್ಐ ನೀಡಿದ ನೆರವಿಗೆ ಕೃತಜ್ಞತೆ ಸಲ್ಲಿಸಿರುವ ಮಹಿಳೆ ಈ ವಿಷಯವನ್ನು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರ ಗಮನಕ್ಕೆ ತಂದಿದ್ದಾರೆ. ಸಂತೋಷ್ ಅವರನ್ನು ಸೋಮವಾರ ತಮ್ಮ ಕಚೇರಿಗೆ ಕರೆಸಿಕೊಂಡ ಕಮಿಷನರ್ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.