ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಬಾಂಬ್ ಪ್ರಕರಣ: ಆರೋಪಿ ಆದಿತ್ಯ‌ ರಾವ್ 10 ದಿನ ಪೊಲೀಸ್ ವಶಕ್ಕೆ

Last Updated 23 ಜನವರಿ 2020, 11:26 IST
ಅಕ್ಷರ ಗಾತ್ರ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸ್ಫೋಟಕ‌ ಇರಿಸಿದ್ದ ಆರೋಪ ಎದುರಿಸುತ್ತಿರುವ ಆದಿತ್ಯ ರಾವ್‌ನನ್ನು ಮಂಗಳೂರಿನ 6 ನೇ ಜೆಎಂಎಫ್‌ಸಿ ನ್ಯಾಯಾಲಯ 10 ದಿನ ಪೊಲೀಸ್ ವಶಕ್ಕೆ ನೀಡಲು ತೀರ್ಮಾನಿಸಿದೆ.

ಬುಧವಾರ ರಾತ್ರಿ ವಿಚಾರಣೆ ನಡೆಸಿದ ಪೊಲೀಸರು, ಗುರುವಾರ ಮಧ್ಯಾಹ್ನ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ವಿಚಾರಣೆ ಇನ್ನೂ ಬಾಕಿ ಇದ್ದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಎಸಿಪಿ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮನವಿ‌ ಮಾಡಿದರು.

ಮನವಿ ಪುರಸ್ಕರಿಸಿದ ನ್ಯಾಯಾಧೀಶರಾದ ಕಿಶೋರ್ ಕುಮಾರ್ ಅವರು, 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT