ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ಎಂ.ಡಿ.ನದೀಮ್ ಉಲ್ ಹಕ್ ನೇತೃತ್ವದ ನಿಯೋಗ ಶನಿವಾರ ಬೆಳಿಗ್ಗೆ ಮಂಗಳೂರಿಗೆ ಬಂದು ಗೋಲಿಬಾರ್ನಲ್ಲಿ ಮೃತಪಟ್ಟಿರುವ ಕಂದಕ್ ನಿವಾಸಿ ಅಬ್ದುಲ್ ಜಲೀಲ್ ಹಾಗೂ ಕುದ್ರೋಳಿ ನಿವಾಸಿ ನೌಶೀನ್ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿತು. ಬಳಿಕ ತಲಾ ₹ 5 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿತು. ಮಹಾನಗರ ಪಾಲಿಕೆ ಸದಸ್ಯರಾದ ಲತೀಫ್ ಕಂದಕ್, ಶಂಸುದ್ದೀನ್ ಕುದ್ರೋಳಿ ಉಪಸ್ಥಿತರಿದ್ದರು.